Dhiryam Sarvatra Sadhanam Kannada movie. ಧೈರ್ಯಂ ಸರ್ವತ್ರ ಸಾಧನಂ ಚಿತ್ರದ ಮೂಲಕ ಹೊಸ ಕಲಾವಿದನ ಆಗಮನ.

ಕನ್ನಡ ಚಿತ್ರರಂಗದಲ್ಲಿ ಹೊಸ ನಾಯಕ ನಟರ ಆಗಮನ ಹೆಚ್ಚಾಗೆ ಇದೆ, ಈ ಸಾಲಿನಲ್ಲಿ ಧೈರ್ಯಂ ಸರ್ವತ್ರ ಸಾಧನಂ ಚಿತ್ರದ ನಾಯಕ ನಟ ವಿವಾನ್ ಕೆಕೆ ಕೂಡ ಒಬ್ಬರು,
ಇವರು ಮೂಲತಃ ಕೋಲಾರ ಜಿಲ್ಲೆಯವರು ತಂದೆ ಉದ್ಯಮಿಯಾಗಿದ್ದು ತಾವು ಸಿವಿಲ್ ಇಂಜಿನಿಯರಿಂಗ್ ವ್ಯಾಸಂಗ ಮುಗಿಸಿದ ನಂತರ ಧೈರ್ಯಂ ಸರ್ವತ್ರ ಸಾಧನಂ ಚಿತ್ರದ ನಿರ್ದೇಶಕರಿಗೆ ಪರಿಚಯವಾಗಿ ಅವರ ಗರಡಿಯಲ್ಲೇ, ಕಳೆದ 4 ವರ್ಷದಿಂದ ಅಭಿನಯ, ನೃತ್ಯ, ಸಾಹಸ, ವಿಭಾಗಗಳಲ್ಲಿ ಪರಿಣಿತಿ ಪಡೆದು, ಧೈರ್ಯಂ ಸರ್ವತ್ರ ಸಾಧನಂ ಚಿತ್ರಕ್ಕೆ ನಾಯಕ ನಟನಾಗಿ ಆಯ್ಕೆ ಆಗಿದ್ದಾಗಿ ತಿಳಿಸಿದರು,

ಈ ನಡುವೆ ಸಿನಿಮಾದ ಆ ಪಾತ್ರಕ್ಕಾಗಿ, ಸತತ 5 ತಿಂಗಳು ಶೂಟಿಂಗ್ ಮಾಡುವ ಲೋಕೇಶನ್ ಅಲ್ಲೇ ವಾಸವಿದ್ದು ಅಲ್ಲಿನ, ಹಳ್ಳಿ ಜನರನ್ನು ಅರಿತು ಪಾತ್ರಕ್ಕಾಗಿ ತಯಾರಿ ಮಾಡಿದ್ದಾಗಿ, ಹಾಗೆ ಮೇಕೆ ಮೆಯಿಸುವುದು, ಕೊಟ್ಟಿಗೆಯಲ್ಲಿ ಹಸು ಕಸ ಗುಡಿಸುವುದರಿಂದ ಹಿಡಿದು, ಕಾಡಿನಲ್ಲಿ ಅಭ್ಯಾಸಕ್ಕಾಗಿ ರಾತ್ರಿಯ ಹೊತ್ತು, ನಿರ್ದೇಶಕರ ಜೊತೆ ಕಾಡು ಪ್ರಾಣಿಗಳನ್ನು ನೋಡಲು ಹೋಗುತ್ತಿದ್ದರಂತೆ,

ಹೀಗೆ ತಯಾರಿ ನಡೆಸಿ, ಶೂಟಿಂಗ್ ಮಾಡುವಾಗ, ಅದರಲ್ಲೂ ಫೈಟಿಂಗ್ ಮಾಡುವಾಗ ಅನೇಕ ಪೆಟ್ಟುಗಳಾಗಿ, ಅನೇಕ ಬಾರಿ ವಿಷ ಹಾವುಗಳಿಂದ ಪಾರಾಗಿದ್ದಾಗಿಯೂ ತಿಳಿಸಿದ್ದರು, ಒಟ್ಟಾರೆ ಧೈರ್ಯಂ ಸರ್ವತ್ರ ಸಾಧನಂ ಚಿತ್ರಕ್ಕೆ ಧೈರ್ಯ ಮಾಡಿ ಅಭಿನಹಿಸಿ ಪಾತ್ರಕ್ಕೆ ದುಡಿದಿದ್ದಾಗಿ ನಾಯಕ ವಿವಾನ್ ತಿಳಿಸಿದರು,


ಇದೆ ತಿಂಗಳು 23ಕ್ಕೆ ರಾಜ್ಯಾದ್ಯಂತ ಚಿತ್ರ ಬಿಡುಗಡೆ ಆಗುತ್ತಿದ್ದು, ನಾಡಿನ ಜನತೆ ಚಿತ್ರವನ್ನು ನೋಡಿ ನಮ್ಮ ಬೆನ್ನು ತಟ್ಟಿದರೆ, ಅದೇ ನಮಗೆ ಉತ್ತಮ ಪಲಿತಾಂಶ ಎಂದು ಪ್ರತಿಕ್ರಿಯೆ ನೀಡಿದರು,
ಕನ್ನಡ ಚಿತ್ರರಂಗದಲ್ಲಿ ವಿವಾನ್ ಕೆಕೆ ಗಟ್ಟಿಯಾಗಿ ನಿಲ್ಲಲು ಎಲ್ಲಾ ತಯಾರಿ ನಡೆಸುತ್ತಿರುವುದಾಗಿ ಹೇಳಿದರು, ಅವರಿಗೆ ನಮ್ಮ ಶುಭಕಾಮನೆಗಳು.

Leave a Reply

Your email address will not be published. Required fields are marked *

×

Hello!

Contact our editor through WhatsApp or email us kannadacinemaloka@gmail.com

× Contact Editor